ಕುಂದಾಪುರ ಆ.7: ಇಸ್ಪೀಟ್ ಜುಗಾರಿ ಪ್ರಕರಣ ಕ್ಕೆ ಸಂಬಂಧಿಸಿದ ಎರಡು ಪ್ರತ್ಯೇಕ ಪ್ರಕರಣದಲ್ಲಿ 13 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ
ಈ ಬಗ್ಗೆ ಖಚಿತ ಮಾಹಿತಿ ಪಡೆದ ಕುಂದಾಪುರ ಪೊಲೀಸ್ ಠಾಣೆಯ ಪಿ.ಎಸ್.ಐ ಪ್ರಸಾದ್ ಕುಮಾರ್ ಅವರು ಇತರ ಸಿಬ್ಬಂದಿಗಳೊಂದಿಗೆ ನಿನ್ನೆ ಮಧ್ಯಾಹ್ನದ ವಡೇರಹೋಬಳಿ ಗ್ರಾಮದ ಶಾಸ್ತ್ರೀ ಪಾರ್ಕ್ ಬಳಿಯ ಸಾರ್ವಜನಿಕ ಸ್ಥಳಕ್ಕೆ ದಾಳಿ ನಡೆಸಿ ಇಸ್ಪೀಟು ಜುಗಾರಿ ಆಡುತ್ತಿದ್ದ ಅಭಿಜೀತ್, ಸುಕೇಶ ಕೆ, ವಿಲಾಸ್ ಆಚಾರ್ಯ, ಶಶಾಂಕ ಶೆಟ್ಟಿ, ಸನತ್ ಕುಮಾರ ಶೆಟ್ಟಿ, ಸಚಿನ್ ಎಂಬುವವರನ್ನು ವಶಕ್ಕೆ ಪಡೆದು, ಅವರ ಬಳಿ ಇದ್ದ 5050 ರೂ. ನಗದು ಹಾಗೂ ಇಸ್ಪೀಟ್ ಆಟಕ್ಕೆ ಬಳಸಿದ್ದ ಇತರ ವಸ್ತುಗಳನ್ನು ವಶಪಡಿಸಿ ಕೊಂಡಿದ್ದಾರೆ.
ಮತ್ತೊಂದೆಡೆ ನಿನ್ನೆ ವಡೇರಹೋಬಳಿ ಗ್ರಾಮದ ಟಿ.ಟಿ ರೋಡ್ ಎಂಬಲ್ಲಿನ ಸಾರ್ವಜನಿಕ ಸ್ಥಳದಲ್ಲಿ ನಡೆಯುತ್ತಿದ್ದ ಇಸ್ಪೀಟು ಜುಗಾರಿ ಅಡ್ಡೆಗೆ ಇತರ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿದ ಕುಂದಾಪುರ ಪೊಲೀಸ್ ಠಾಣೆಯ ಪಿಎಸ್ಐ ಸದಾಶಿವ ಆರ್ ಗವರೋಜಿ ಅವರು ಇಸ್ಪೀಟ್ ಜುಗಾರಿ ಆಟ ಆಡುತ್ತಿದ್ದ ವಿಶ್ವನಾಥ, ಗಣೇಶ ದೇವಾಡಿಗ, ರತ್ನಾಕರ, ಬೀರಪ್ಪ ಗೌಡರ್, ದೇವ, ಮಂಜುನಾಥ, ಶ್ರೀಕಾಂತ ಬಿ ಗೌಡರ್, ಎಂಬುವವರನ್ನು ವಶಕ್ಕೆ ಪಡೆದು, ಅವರ ಬಳಿ ಇದ್ದ 5950 ರೂ. ನಗದು ಹಾಗೂ ಇಸ್ಪೀಟ್ ಆಟಕ್ಕೆ ಬಳಸಿದ್ದ ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಈ ಎರಡು ಪ್ರಕರಣಕ್ಕೆ ಸಂಬಂಧಿಸಿ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ.
- Advertisement -
ಇನ್ನು ಕೋಟ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಮಧು ಬಿಇ ಅವರು ಇತರ ಸಿಬ್ಬಂದಿ ಗಳೊಂದಿಗೆ ಜು.19 ರಂದು ರೌಂಡ್ಸ್ ಕರ್ತವ್ಯ ದಲ್ಲಿದ್ದ ವೇಳೆ ಮಣೂರು ಗ್ರಾಮದ ಸರ್ವಿಸ್ ರಸ್ತೆಯಲ್ಲಿ ಒಂದು ಕಾರಿನಲ್ಲಿ ಮಟ್ಕಾ ಜುಗಾರಿ ಆಡುತ್ತಿದ್ದ ಬ್ರಹ್ಮಾವರದ ಪ್ರವೀಣ (47), ರಾಘವೇಂದ್ರ (42) ಎಂಬ ಇಬ್ಬರಿಗೆ ಠಾಣೆಗೆ ಹಾಜರಾಗುವಂತೆ ನೋಟೀಸ್ ಜಾರಿ ಮಾಡಿ ಅವರ ಬಳಿ ಇದ್ದ 3,400 ರೂ.ನಗದು, ಕಾರು ಹಾಗೂ ಇತರ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.